Monday, November 30, 2009

ಕರ್ನಾಟಕ ರಕ್ಷಣಾ ವೇದಿಕೆ - ಒಂದು ಪರಿಚಯ

ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು ಎನ್ನುವ ಘೋಷವಾಕ್ಯದೊಂದಿಗೆ ೧೯೯೯ರಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಕ್ಷಣಾ ವೇದಿಕೆ ಇಂದು ನಾಡಿನ ಅತಿದೊಡ್ಡ ಬಲಿಷ್ಟ ಕನ್ನಡಪರ ಸಂಘಟನೆಯಾಗಿ, ಹೆಮ್ಮರವಾಗಿ ಬೆಳೆದು ನಿಂತಿದೆ. ರಾಜ್ಯಾಧ್ಯಕ್ಷರಾದ ಶ್ರೀ ಟಿ.ಎ.ನಾರಾಯಣಗೌಡರ ದಕ್ಷ ನಾಯಕತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ತಾಯಿಯ ಮಕ್ಕಳನ್ನು ಹಳದಿ ಕೆಂಪು ಬಾವುಟದ ಅಡಿಯಲ್ಲಿ ಸಂಘಟಿಸಲಾಗುತ್ತದೆ. ಇದೀಗ ರಾಜ್ಯಾದ್ಯಂತ ಸಾವಿರಾರು ಶಾಖೆಗಳನ್ನು ಹೊಂದಿರುವ ಕರ್ನಾಟಕ ರಕ್ಷಣಾ ವೇದಿಕೆಯ ನೋಂದಾಯಿತ ಸದಸ್ಯರ ಸಂಖ್ಯೆಯೇ ಐವತ್ತು ಲಕ್ಷಕ್ಕೂ ಹೆಚ್ಚು. ದಿನೇದಿನೇ ಸಂಘಟನೆಯು ನಾಡಿನ ಎಲ್ಲಾ ಜನತೆಯ ಪ್ರೀತಿ, ಅಭಿಮಾನ, ನಂಬಿಕೆಗಳನ್ನು ಹೆಚ್ಚು ಹೆಚ್ಚು ಗಳಿಸುತ್ತಿದ್ದು ಕನ್ನಡಿಗರೆದೆಯಲ್ಲಿ ’ ಸಮೃಧ್ಧವಾದ ನಾಳೆಗಳು ಕನ್ನಡಿಗರದ್ದಾಗಲಿವೆ ’ ಎನ್ನುವ ಭರವಸೆಗೆ ಕಾರಣವಾಗಿದೆ. ಕನ್ನಡ ಪರವಾದ ಹೋರಾಟಗಳನ್ನು ರಾಜಿ ರಹಿತವಾಗಿ, ರಾಜಕೀಯ ರಹಿತವಾಗಿ ನಡೆಸಿಕೊಂಡು ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯ ನಿರ್ಭೀಡ ನಿಲುವು ಮತ್ತು ಪ್ರಾಮಾಣಿಕವಾದ ನಡೆಗಳಿಂದಾಗಿ ನಾಡಿನ ಮೂಲೆಮೂಲೆಗಳ ಕನ್ನಡಿಗರಿಂದ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಈ ಬ್ಲಾಗಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮಾಡಿಕೊಂಡು ಬಂದಿರುವ ಹೋರಾಟಗಳ ಪತ್ರಿಕಾ ವರದಿಗಳು, ಸುದ್ದಿವಾಹಿನಿಗಳಲ್ಲಿ ಪ್ರಸಾರವಾದ ಚಿತ್ರದ ತುಣುಕುಗಳು ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಟಿ.ಎ.ನಾರಾಯಣ ಗೌಡರು ನಾಡನ್ನು ಉದ್ದೇಶಿಸಿ ಮಾತನಾಡಿರುವ ಚಿತ್ರದ ತುಣುಕುಗಳು ನೋಡಬಹುದು.

Friday, November 20, 2009

ಗಣಿ ರೆಡ್ಡಿಗಳ ವಿರುದ್ಧ ಗುಡುಗಿದ ಟಿ.ಏ. ನಾರಾಯಣ ಗೌಡರು

ಸಂವಹನವು ನವಂಬರ್ ೧೨ರಂದು ನಡೆಸಿದ ವಿಚಾರ ಸಂಕೀರ್ಣದಲ್ಲಿ ಪಾಲ್ಗೊಂಡಿದ್ದ ನಮ್ಮ ಅಧ್ಯಕ್ಷರಾದ ಟಿ.ಏ. ನಾರಯಣ ಗೌಡರು ಗಣಿ ರೆಡ್ಡಿ ಸಹೋದರರನ್ನು ಮಣಿಸಲು ಕ.ರ.ವೇ. ಗೆ ಮಾತ್ರ ಸಾದ್ಯ ಎಂದು ಹೇಳಿದರು.

ಸಂವಹನ ನಡೆಸಿದ ವಿಚಾರ ಸಂಕೀರ್ಣದ ವರದಿಯನ್ನು ಇಲ್ಲಿ ನೋಡಿ.


Thursday, November 19, 2009

ರೈಲ್ವೇ - ಕ.ರ.ವೇ. ಹೋರಾಟಕ್ಕೆ ಸಿಕ್ಕ ಜಯ

ರೈಲ್ವೇ ಇಲಾಖೆಯ ಪರೀಕ್ಷೆಯನ್ನು ಇನ್ನು ಕನ್ನಡದಲ್ಲೆ ತೆಗೆದುಕೊಳ್ಳ ಬೊಹುದು ಎಂದು ಭಾರತ ಸರ್ಕಾರ ಹೇಳಿದೆ. ಕರ್ನಾಟಕ ರಕ್ಷಣಾ ವೇದಿಕೆ ೨ ವರುಷಗಳಿಂದ ಸತತವಾಗಿ ನಡೆಸಿಕೊಂದು ಬಂದ ಹೋರಾಟಕ್ಕೆ ಸಿಕ್ಕಿರುವ ಜಯ ಇದಾಗಿದೆ.

ಕನ್ನಡದಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳಬೊಹುದು ಎಂದು ಬಂದಿರುವ ವರದಿಯನ್ನು ಇಲ್ಲಿ ನೋಡಿ.




Tuesday, November 17, 2009

ಕರ್ನಾಟಕ ರಕ್ಷಣಾ ವೇದಿಕೆ ರಾಜಕೀಯ ಹೋರಾಟಕ್ಕೆ - ಅಧ್ಯಕ್ಷರ ಲೇಖನಿ

ಅಕ್ಕರೆಯ ಕನ್ನಡಿಗಾ,


ಕರ್ನಾಟಕ ರಕ್ಷಣಾ ವೇದಿಕೆಯು ಶುರುವಾಗಿ ಹತ್ತು ವರ್ಷಗಳಾದವು. ಈ ಹೋರಾಟದ ಹಾದಿಯಲ್ಲಿ ಎದುರಿಸಿದ ಸವಾಲುಗಳು ಅನೇಕ. ಸಾಧಿಸಿದ ಗೆಲುವುಗಳು ಅನೇಕ. ಈ ಸಂದರ್ಭದಲ್ಲಿ ರಾಜಕೀಯ ಹೋರಾಟಕ್ಕೆ ಧುಮುಕುವ ಸನ್ನಿವೇಶ ಸೃಷ್ಟಿಯಾಗಿರುವ ಬಗ್ಗೆ ಈ ಬಾರಿಯ ಅಧ್ಯಕ್ಷರ ಲೇಖನಿಯಲ್ಲಿ ಓದಿರಿ.


http://karnatakarakshanavedike.org/modes/view/25/adhyakshara-nudi.html

- ಕರ್ನಾಟಕ ರಕ್ಷಣಾ ವೇದಿಕೆ

Wednesday, November 4, 2009

ಕನ್ನಡ ಪ್ರಭದಲ್ಲಿ ಟಿ. ಏ. ನಾರಾಯಣ ಗೌಡರ ಸಂದರ್ಶನ

ಕನ್ನಡ ಪ್ರಭದೊಂದಿಗೆ ನಮ್ಮ ರಾಜ್ಯಾಧ್ಯಕ್ಷರಾದ ಟಿ.ಏ. ನಾರಾಯಣ ಗೌಡರು ಪ್ರಾದೇಶಿಕ ಪಕ್ಷದ ಚಿಂತನೆಯ ಬಗ್ಗೆ ಮಾತನಾಡಿದರು.

ಪ್ರಾದೇಶಿಕ ಪಕ್ಷದ ಚಿಂತನೆಯ ಬಗ್ಗೆ ಇಲ್ಲಿ ಓದಿ