Monday, January 23, 2012

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ನೀರಿನ ಬವಣೆ ನೀಗಿಸಲು ಪರಮಶಿವಯ್ಯ ವರದಿ ಜಾರಿಗೆ ಆಗ್ರಹ.

ಕೋಲಾರ ಹಾಗು ಚಿಕ್ಕಬಳ್ಳಾಪುರ ಜಿಲ್ಲೆಗಳ ಕುಡಿಯುವ ನೀರಿನ ಬವಣೆ ನೀಗಿಸಲು ಪರಮಶಿವಯ್ಯ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿ ಮಾಲೂರಿನಲ್ಲಿ ೨೩-೦೧-೨೦೧೨ರಂದು ಕ.ರವೇ. ಇಂದ ದೊಡ್ಡ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಬೆಂಗಳೂರು ರಸ್ತೆಯ ಡಾ.ವೃತ್ತದಿಂದ ಭಾರಿ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಬಸ್ ನಿಲ್ದಾಣದ ಮಾರಿಕಾಂಬ ಮಹಾದ್ವಾರದ ಬಳಿ ಜಮಾಯಿಸಿ ಬಹಿರಂಗ ಸಭೆ ನಡೆಸಿದರು.

ಇದರ ವರದಿಯನ್ನು ಇಲ್ಲಿ ನೋಡಿ.

Thursday, January 12, 2012

ಡಾ. ಸರೋಜಿನಿ ಮಹಿಷಿ ವರದಿ ಅನ್ವಯ ಕನ್ನಡಿಗರಿಗೆ ಕೆಲಸ ಕೊಡಬೇಕು ಎಂದು ಆಗ್ರಹಿಸಿ ಕೊಪ್ಪಳದಲ್ಲಿ ಪ್ರತಿಭಟನೆ

ಕೊಪ್ಪಳ ಜಿಲ್ಲೆಯಲ್ಲಿರುವ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಕೆಲಸವಿಲ್ಲ. ಕನ್ನಡಿಗರಿಂದ ಭೂಮಿ ಪಡೆವಾಗ ಬರೆದುಕೊಟ್ಟಿದ್ದ ಮುಚ್ಚಳಿಕೆಯನ್ನು ಗಾಳಿಗೆ ತೂರಿ ಎಲ್ಲಿಂದಲೋ ಬಂದವರಿಗೆ ಕೆಲಸಕೊಡುತ್ತಿದ್ದಾರೆ.

ಡಾ. ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಕೆಲಸ ಕೊಡಬೇಕು ಎಂದು ಆಗ್ರಹಿಸಿ ಕೊಪ್ಪಳ ಜಿಲ್ಲೆಯಲ್ಲಿ ನಮ್ಮ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ವರದಿಯನ್ನು ಇಲ್ಲಿ ನೋಡಿ


Thursday, December 29, 2011

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ "ನೇರನುಡಿ" ಪುಸ್ತಕ ಬಿಡುಗಡೆ ಕಾರ್ಯಕ್ರಮ

ಕರವೇ ನಲ್ನುಡಿಯಲ್ಲಿ ಪ್ರಕಟಗೊಳ್ಳುತ್ತಿದ್ದ "ನೇರನುಡಿ" ಅಂಕಣಗಳ ಸಂಕಲವನ್ನು ೨೬-೧೨-೨೦೧೧ ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪುಸ್ತಕರೂಪದಲ್ಲಿ ಹೊರತರಲಾಯಿತು. ೭೮ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಸಿ.ಪಿ.ಕೆ. ಹಾಗು ಗಣ್ಯರಾದ ಸಚಿವ ಆರ್. ಅಶೋಕ್, ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಡಾ. ನಲ್ಲೂರು ಪ್ರಸಾದ್, ರಂಜಾನ್ ದರ್ಗ, ಡಾ. ನಟರಾಜ್ ಹುಳಿಯಾರ್ ಹಾಜರಿದ್ದರು.

ಇದರ ವರದಿಯನ್ನು ಇಲ್ಲಿ ನೋಡಿ.



Sunday, December 18, 2011

ಗುಲ್ಬರ್ಗಾ ಪಾಲಿಕೆಯಲ್ಲಿ ಉರ್ದು ಎರಡನೆ ಆಡಳಿತ ಭಾಷೆ ಎಂಬ ನಿರ್ಧಾರವನ್ನು ಸರ್ಕಾರ ಪರಿಗಣಿಸಬಾರದೆಂದು ಹೋರಾಟ

ಗುಲ್ಬರ್ಗಾ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಉರ್ದು ಭಾಷೆಗೆ ಎರಡನೆ ಆಡಳಿತ ಭಾಷೆಯ ಸ್ಥಾನ ನೀಡುವ ನಿರ್ಣಯವನ್ನು ಕೈಗೊಂಡಿದ್ದಾರೆ. ಆದರೆ, ಗುಲ್ಬರ್ಗಾ ಮಹಾನಗರದ ವ್ಯಾಪ್ತಿಯಲ್ಲಿ ವಾಸಿಸುವ ಮುಸಲ್ಮಾನ ಬಂಧುಗಳು ಕನ್ನಡಿಗರೇ ಆಗಿದ್ದು, ಎಲ್ಲರ ಜೊತೆ ಬೆರೆತು ಬಾಳುತಿದ್ದಾರೆ. ಕೇವಲ ರಾಜಕೀಯ ಕಾರಣಗಳಿಗಾಗಿ ಮಾಡಿರುವ ಇಂತಹ ನಿರ್ಧಾರ ಜನರನ್ನು ದಿಕ್ಕುತಪ್ಪಿಸುವ ಕೆಲಸವಾಗಿದ್ದು, ಸರ್ಕಾರ ಇದನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿ ನಾವು ಬೆಂಗಳೂರಿನಲ್ಲಿ ದಿನಾಂಕ ೧೭ ಡಿಸೆಂಬರ್ ೨೦೧೧ ರಂದು ಪ್ರತಿಭಟನೆ ನಡೆಸಿದೆವು.

ನಾವು ನಡೆಸಿದ ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:

ಕನ್ನಡಪ್ರಭ ವರದಿ:
ವಿಜಯಕರ್ನಾಟಕ ವರದಿ:

ಉದಯವಾಣಿ ವರದಿ:
ಈಸಂಜೆ ವರದಿ:

Wednesday, December 14, 2011

ಮೆಟ್ರೋದಲ್ಲಿ ಕನ್ನಡಿಗರಿಗೆ ಆದ್ಯತೆ ಬಗ್ಗೆ ಕರವೇ ನಡೆಸಿದ ಹೋರಾಟಕ್ಕೆ ಬಿ.ಎಂ.ಆರ್.ಸಿ.ಎಲ್. ಪ್ರತಿಕ್ರಿಯೆ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ನೀಡಬೇಕು, ಎಲ್ಲಾ ಹಂತಗಳಲ್ಲಿಯೂ ಕನ್ನಡವನ್ನು ಬಳಸಬೇಕು ಮತ್ತು ಅನಗತ್ಯವಾದ ಹಿಂದಿ ಬಳಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿರುವ ಬಿ.ಎಂ.ಅರ್.ಸಿ.ಎಲ್ ಮುಖ್ಯ ಕಛೇರಿಯ ಮುಂದೆ ನಾವು ಡಿಸೆಂಬರ್ ೨, ೨೦೧೧ ರಂದು ಪ್ರತಿಭಟನೆ ನಡೆಸಿದ್ದೆವು. ಕನ್ನಡಿಗರ ಪರವಾಗಿ ನಾವು ಮಾಡಿದ್ದ ಈ ಹಕ್ಕೊತ್ತಾಯ ಪರಿಣಾಮ ಬೀರಿದ್ದು, ಪ್ರತಿಭಟನೆ ವೇಳೆ ನಾವು ಮನವಿಪತ್ರದಲ್ಲಿ ಪ್ರಸ್ತಾಪಿಸಿದ್ದ ಕೆಲವೊಂದು ವಿಷಯಗಳಿಗೆ ಬಿ.ಎಂ.ಆರ್.ಸಿ.ಎಲ್. ಕಂಪನಿ ಪ್ರತಿಕ್ರಿಯೆ ನೀಡಿದೆ.

ಬಿ.ಎಂ.ಆರ್.ಸಿ.ಎಲ್ ಕಂಪನಿಯ ಕಾರ್ಯದರ್ಶಿ ಮತ್ತು ಪ್ರಧಾನ ವ್ಯವಸ್ಥಾಪಕರು ಪ್ರತಿಕ್ರಿಯೆ ನೀಡಿ ಕಳಿಸಿರುವ ಪತ್ರದ ಪ್ರತಿಯನ್ನು ಕೆಳಗೆ ಲಗತ್ತಿಸಲಾಗಿದೆ: