Monday, July 5, 2010

ಕರ್ನಾಟಕ ರಕ್ಷಣಾ ವೇದಿಕೆ - ಒಂದು ಪರಿಚಯ

ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು ಎನ್ನುವ ಘೋಷವಾಕ್ಯದೊಂದಿಗೆ ೧೯೯೯ರಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಕ್ಷಣಾ ವೇದಿಕೆ ಇಂದು ನಾಡಿನ ಅತಿದೊಡ್ಡ ಬಲಿಷ್ಟ ಕನ್ನಡಪರ ಸಂಘಟನೆಯಾಗಿ, ಹೆಮ್ಮರವಾಗಿ ಬೆಳೆದು ನಿಂತಿದೆ. ರಾಜ್ಯಾಧ್ಯಕ್ಷರಾದ ಶ್ರೀ ಟಿ.ಎ.ನಾರಾಯಣಗೌಡರ ದಕ್ಷ ನಾಯಕತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ತಾಯಿಯ ಮಕ್ಕಳನ್ನು ಹಳದಿ ಕೆಂಪು ಬಾವುಟದ ಅಡಿಯಲ್ಲಿ ಸಂಘಟಿಸಲಾಗುತ್ತದೆ. ಇದೀಗ ರಾಜ್ಯಾದ್ಯಂತ ಸಾವಿರಾರು ಶಾಖೆಗಳನ್ನು ಹೊಂದಿರುವ ಕರ್ನಾಟಕ ರಕ್ಷಣಾ ವೇದಿಕೆಯ ನೋಂದಾಯಿತ ಸದಸ್ಯರ ಸಂಖ್ಯೆಯೇ ಐವತ್ತು ಲಕ್ಷಕ್ಕೂ ಹೆಚ್ಚು. ದಿನೇದಿನೇ ಸಂಘಟನೆಯು ನಾಡಿನ ಎಲ್ಲಾ ಜನತೆಯ ಪ್ರೀತಿ, ಅಭಿಮಾನ, ನಂಬಿಕೆಗಳನ್ನು ಹೆಚ್ಚು ಹೆಚ್ಚು ಗಳಿಸುತ್ತಿದ್ದು ಕನ್ನಡಿಗರೆದೆಯಲ್ಲಿ ’ ಸಮೃಧ್ಧವಾದ ನಾಳೆಗಳು ಕನ್ನಡಿಗರದ್ದಾಗಲಿವೆ ’ ಎನ್ನುವ ಭರವಸೆಗೆ ಕಾರಣವಾಗಿದೆ. ಕನ್ನಡ ಪರವಾದ ಹೋರಾಟಗಳನ್ನು ರಾಜಿ ರಹಿತವಾಗಿ, ರಾಜಕೀಯ ರಹಿತವಾಗಿ ನಡೆಸಿಕೊಂಡು ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯ ನಿರ್ಭೀಡ ನಿಲುವು ಮತ್ತು ಪ್ರಾಮಾಣಿಕವಾದ ನಡೆಗಳಿಂದಾಗಿ ನಾಡಿನ ಮೂಲೆಮೂಲೆಗಳ ಕನ್ನಡಿಗರಿಂದ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಈ ಬ್ಲಾಗಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮಾಡಿಕೊಂಡು ಬಂದಿರುವ ಹೋರಾಟಗಳ ಪತ್ರಿಕಾ ವರದಿಗಳು, ಸುದ್ದಿವಾಹಿನಿಗಳಲ್ಲಿ ಪ್ರಸಾರವಾದ ಚಿತ್ರದ ತುಣುಕುಗಳು ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಟಿ.ಎ.ನಾರಾಯಣ ಗೌಡರು ನಾಡನ್ನು ಉದ್ದೇಶಿಸಿ ಮಾತನಾಡಿರುವ ಚಿತ್ರದ ತುಣುಕುಗಳು ನೋಡಬಹುದು.