Tuesday, February 2, 2010

ಮರಾಠಿ ಸೀಮಾ ಪರಿಷತ್ ಮೇಳಕ್ಕೆ ಕರವೇ ವಿರೋಧ

ಬೆಳಗಾವಿ ಮಹಾರಾಷ್ಟ್ರದಲ್ಲಿದೆ ಎಂದು ಉಪರಾಷ್ಟ್ರಪತಿಗಳ ಕಾರ್ಯಾಲಯದಿಂದ ರಾಜ್ಯದ ಬೆಳಗಾವಿ ಜಿಲ್ಲೆಯ ಕ್ರೀಡಾಧಿಕಾರಿಗಳ ಕಛೇರಿಗೆ ಬಂದಿರುವ ಪತ್ರಕ್ಕೆ ಉತ್ತರಿಸದೆ ಮೌನವಹಿಸಿರುವ ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ರಾಜ್ಯಾದ್ಯಂತ ನಮ್ಮ ವೇದಿಕೆ ಇಂದು ಪ್ರತಿಭಟನೆ ನಡೆಸಿತು. ಇದರ ಜೊತೆಗೆ ಕನ್ನಡ ನಾಡಿನ ಏಕತೆಗೆ ಮಾರಕವಾಗಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯು ನಡೆಸಲು ಉದ್ದೇಶಿಸಿರುವ ಮರಾಠಿ ಸೀಮಾ ಪರಿಷತ್ ಮೇಳಕ್ಕೆ ಅವಕಾಶ ನೀಡಬಾರದೆಂದು ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಇದರ ಪತ್ರಿಕಾ ವರದಿಯನ್ನು ನೋಡಿ.