Tuesday, July 27, 2010

ಪ್ರತಿಭಟನೆ ನಡೆಸಿದ ಹೋರಾಟಗಾರರಿಗೆ ಕೈ ಕೋಳ

ಕೊಪ್ಪಳ ನಗರದ ಮಧ್ಯ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಿರಿದಾಗಿದ್ದು ವಾಹನ ದಟ್ಟಣೆ ಹಾಗೂ ಅಪಘಾತಗಳಿಗೆ ಕಾರಣವಾಗಿದೆ. ಇದರಿಂದ ನಮ್ಮ ಕಾರ್ಯಕರ್ತರು ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಜುಲೈ ೨೫ ರಂದು ಪ್ರತಿಭಟನೆ ನಡೆಸಿದ್ದರು. ಪೋಲೀಸರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಮ್ಮ ಕಾರ್ಯಕರ್ತರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಕೈ ಕೋಳವನ್ನು ತೊಡೆಸಿದ್ದರು. ಪ್ರತಿಭಟನೆ ನಡೆಸಿದ ಕಾರ್ಯಕರ್ತರಿಗೆ ಕೈ ಕೋಳವನ್ನು ತೊಡೆಸಿ, ಹೋರಾಟಗಾರರನ್ನು ಅಪರಾಧಿಗಳಂತೆ ಬಿಂಬಿಸಿ ನಮ್ಮ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದರ ವಿರುದ್ಧ ಜೂನ್ ೨೭ ರಂದು ನಮ್ಮ ಕಾರ್ಯಕರ್ತರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಿದರು.