Sunday, August 8, 2010

ಕ.ರ.ವೇ. ಇಂದ ಕವನ ಸಂಕಲನಗಳ ಬಿಡುಗಡೆ

ಕನ್ನಡ ನಾಡಿನ ನೆಲ, ಜಲ, ನಾಡಿನ ಜ್ವಲಂತ ಸಮಸ್ಯೆಗಳು ಮತ್ತು ಕನ್ನಡ ನಾಡಿನ ಇತಿಹಾಸ, ಕಲೆ, ಸಂಸ್ಕೃತಿ ಹಾಗೂ ಇತರೆ ವಿಷಯಗಳು ಸಾಹಿತ್ಯದ ರೂಪದಲ್ಲಿ ಹೊರಬಂದಲ್ಲಿ ಆ ವಿಷಯಗಳು ಹೆಚ್ಚು ಜನರನ್ನು ತಲುಪುತ್ತವೆ. ಈ ನಿಟ್ಟಿನಲ್ಲಿ ಕರವೇ ಕನ್ನಡದ ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸಲು 'ಗಂಗಾ' ಪ್ರಕಾಶನವನ್ನು ಹುಟ್ಟು ಹಾಕಿ, ಪುಸ್ತಕಗಳನ್ನ ನಾಡಿನ ಜನರಿಗೆ ತಲುಪಿಸುವ ಪಣ ತೊಟ್ಟಿದೆ.

ಇದರ ಮೊದಲ ಹೆಜ್ಜೆಯಾಗಿ ನಿವೃತ್ತ ಸರಕಾರಿ ಅಧಿಕಾರಿ ಮಲ್ಲಿಕಾರ್ಜುನಪ್ಪ ನವರು ಬರೆದಿರುವ 'ಚಿತ್ತ ಎತ್ತ' ಮತ್ತು 'ಭಾವಯಾನ' ಎಂಬ ಕವನ ಸಂಕಲನಗಳನ್ನು ರಾಜ್ಯಾಧ್ಯಕ್ಷರಾದ ಟಿ.ಏ ನಾರಾಯಣಗೌಡರು ಬಿಡುಗಡೆಗೊಳಿಸಿದರು. ಈ ಸಮಯದಲ್ಲಿ ಭಾಗವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಲ್ಲೂರು ಪ್ರಸಾದ್ ಕರವೇಯ 'ಗಂಗಾ' ಪ್ರಕಾಶನಕ್ಕೆ ಎಲ್ಲಾ ರೀತಿಯ ಬೆಂಬಲ ನೀಡಲಾಗುವುದೆಂದು ತಿಳಿಸಿದರು.