Tuesday, September 14, 2010

ಹಿಂದಿ ದಿವಸ/ಸಪ್ತಾಹ ದ ವಿರುದ್ಧ ಪ್ರತಿಭಟನೆ

ಪ್ರತಿವರ್ಷ ಸೆಪ್ಟೆಂಬರ್ ೧೪ರಂದು ಭಾರತದಾದ್ಯಂತ ಹಿಂದಿ ದಿವಸ್ ಅನ್ನು ಕೇಂದ್ರ ಸರ್ಕಾರ ಆಚರಿಸಿಕೊಂಡು ಬಂದಿದೆ.
ಇಡೀ ದೇಶದ ಎಲ್ಲ ರಾಜ್ಯಗಳಲ್ಲಿ ಕಾರ್ಯನಿರತರಾಗಿರುವ ಕೇಂದ್ರ ಸರ್ಕಾರದ ನೌಕರರು ಯಾವ ಮಟ್ಟಿಗೆ ಹಿಂದಿ ಭಾಷೆಯನ್ನು ಪ್ರೋತ್ಸಾಹಿಸಿ ಬಳಸುತ್ತರೆನ್ನುವ ಬೆಗ್ಗೆ ವಿಶೇಷ ಒತ್ತು ನೀಡಿ ಈ ದಿನದಂದು ಹಿಂದಿ ಪ್ರಚಾರಕರಿಗೆ ಸನ್ಮಾನಿಸಲಾಗುತ್ತದೆ.
ಈ ಎಲ್ಲ ಆಚರಣೆಗಳನ್ನು ಸಾರ್ವಜನಿಕರ ತೆರಿಗೆ ಹಣ ಬಳಸಿ ಭಾರತ ಸರ್ಕಾರ ಆಚರಿಸುತ್ತಿದೆ. ಈ ಮೂಲಕ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿಯ ಬಳಕೆಯನ್ನು ನಿರಂತರವಾಗಿ ಹೆಚ್ಚಿಸಲು ಯೋಜನೆಗಳನ್ನು ಹಾಕಿಕೊಂಡು ಹೆಜ್ಜೆಹೆಜ್ಜೆಯಾಗಿ ಜಾರಿಮಾಡುತ್ತಿದೆ. ಇದರಿಂದಾಗಿ ಕನ್ನಡಿಗರ ಶಿಕ್ಷಣ, ಉದ್ಯೋಗ, ವ್ಯಾಪಾರ ವಹಿವಾಟುಗಳಲ್ಲಿ ಹಿಂದೀ ಹೇರಿಕೆ ನಡೆಯುತ್ತಿದೆ.

ಕರ್ನಾಟಕ ರಕ್ಷಣಾ ವೇದಿಕೆಯು, ಕೇಂದ್ರಸರ್ಕಾರದ ಈ ಅನ್ಯಾಯದ ಭಾಷಾನೀತಿಯನ್ನೂ, ಅದರಿಂದಾಗುತ್ತಿರುವ ಹಿಂದಿ ಹೇರಿಕೆಯನ್ನೂ ತೀವ್ರವಾಗಿ ಖಂಡಿಸುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ ಸೆಪ್ಟೆಂಬರ್ ೧೪ನ್ನು ಹಿಂದೀ ಹೇರಿಕೆ ವಿರೋಧಿ ದಿನವನ್ನಾಗಿ ಆಚರಿಸುತ್ತಿದೇವೆ. ಈ ವರ್ಷವೂ ರಾಜ್ಯದ ನಾನಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರಸರ್ಕಾರದ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡಸಲಾಯಿತು.
ಬೆಂಗಳೂರಿನಲ್ಲಿ ಮಾನ್ಯ ರಾಜ್ಯಪಾಲರಿಗೆ ಹಿಂದೀ ಹೇರಿಕೆಯ ದುಷ್ಪರಿಣಾಮಗಳನ್ನು ವಿವರಿಸಿ ಕನ್ನಡಿಗರ ಪ್ರತಿರೋಧ ವ್ಯಕ್ತಪಡಿಸುವ ಆಗ್ರಹಪೂರ್ವಕವಾದ ಮನವಿಯನ್ನು ಸಲ್ಲಿಸಲಾಯಿತು.
ರಾಜ್ಯಪಾಲರಿಗೆ ನೀಡಿದ ಮನವಿ ಪತ್ರ -

ಪತ್ರಿಕಾ ವರದಿಯನ್ನು ಇಲ್ಲಿ ನೋಡಿ-