Thursday, September 2, 2010

ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಿ.


ಡಾ. ಸರೋಜಿನಿ ಮಹಿಷಿರವರು ಕರ್ನಾಟಕದಲ್ಲಿರುವ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗವಕಾಶ ನೀಡಿಕೆಯಲ್ಲಿ ಆದ್ಯತೆಯಿರಬೇಕೆಂಬ ಶಿಫಾರೆಸ್ಸನ್ನು ಒಳಗೊಂಡ ವರದಿಯನ್ನು ಎರಡು ದಶಕಗಳ ಹಿಂದೆ ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದರು. ಈ ವರದಿಯನ್ನು ಜಾರಿಗೆ ತಂದರೆ ಕನ್ನಡಿಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ದೊರೆಯುವುದಂತು ನಿಜ. ಆದರೆ ನಮ್ಮ ನಾಡಿನಲ್ಲಿ ಸರಕಾರ ನಡೆಸಿರುವ ಮತ್ತು ನಡೆಸುತ್ತಿರುವ ರಾಜಕಾರಣಿಗಳ ಇಚ್ಚಾ ಶಕ್ತಿಯ ಕೊರತೆಯಿಂದಾಗಿ ಸರೋಜಿನಿ ಮಹಿಷಿರವರ ವರದಿ ಇಷ್ಟು ವರ್ಷವಾದರೂ ಜಾರಿಗೆ ಬಂದಿಲ್ಲ.

ಡಾ.ಸರೋಜಿನಿ ಮಹಿಷಿಯವರ ವರದಿಯನ್ನು ಜಾರಿಗೆ ತಂದು ಕನ್ನಡಿಗರಿಗೆ ಕನ್ನಡ ನಾಡಿನಲ್ಲಿ ಹೆಚ್ಚಿನ ಉದ್ಯೋಗವಕಾಶ ದೊರೆಕಿಸಿಕೊಡಬೇಕಾದುದ್ದು ರಾಜ್ಯ ಸರಕಾರದ ಆದ್ಯ ಕರ್ತವ್ಯ. ಇದಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆಯು ಡಾ.ಸರೋಜಿನಿ ಮಹಿಷಿಯವರ ವರದಿಯನ್ನು ಜಾರಿಗೆ ತರಬೇಕೆಂದು ನಿರಂತರವಾಗಿ ರಾಜ್ಯಸರಕಾರವನ್ನು ಒತ್ತಾಯಿಸುತ್ತಾ ಬಂದಿದೆ.

ಇದೇ ನಿಟ್ಟಿನಲ್ಲಿ ಕರವೇ ವಿದ್ಯಾರ್ಥಿ ಘಟಕದ ಕಾರ್ಯಕರ್ತರು ೨-೯-೨೦೧೦ ರಂದು ಪ್ರತಿಭಟನೆ ನಡೆಸಿ ಸರೋಜಿನಿ ಮಹಿಷಿಯವರ ವರದಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.