Monday, November 1, 2010

ಕನ್ನಡದಲ್ಲಿ ನಾಮಫಲಕ - ಕಾನೂನು ಮುರಿದದ್ದನ್ನು ಪ್ರತಿಭಟಿಸಿದ್ದಕ್ಕೇ ಬಂಧನ

ಕರ್ನಾಟಕದ ಅಂಗಡಿ ಮತ್ತು ವಾಣಿಜೋದ್ಯಮ ಸಂಸ್ಥೆಗಳಲ್ಲಿ ಇರಬೇಕಾದ ಕನ್ನಡದ ನಾಮಫಲಕದ ಕುರಿತು, ಕಾನೂನಿನ ನಿಯಮ ೨೪ರ ಅನ್ವಯ ಇರುವ ಸರ್ಕಾರಿ ಆಜ್ಞೆಯನ್ನು ಇಂದಿಗೂ ಉಲ್ಲಂಘಿಸುತ್ತಿರುವವರ ವಿರುದ್ಧ ಮತ್ತು ಕಾನೂನು ಮುರಿಯುವುದನ್ನು ಸುಮ್ಮನೆ ನೋಡಿಕೊಂಡಿರುವ ಸರ್ಕಾರದ ವಿರುದ್ಧ ಕರ್ನಾಟಕದ ರಾಜ್ಯೋತ್ಸವದ ದಿನವಾದ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆವು. ಅದರ ಪತ್ರಿಕಾ ವರದಿಗಳನ್ನು ಲಗತ್ತಿಸಿದೆ.

ವಿಷಾದದ ಸಂಗತಿಯೆಂದರೆ ೧೯೮೫ ರಲ್ಲೇ ರಚನೆಯಾದ ಕಾನೂನು ೨೫ ವರ್ಷಗಳು ಕಳೆದರೂ ಜಾರಿಯಾಗದೆ, ನಿರಂತರವಾಗಿ ಕಾನೂನು ಮುರಿಯಲಾಗುತ್ತಿದ್ದು ಇಂದಿಗೂ ಇದರ ವಿರುದ್ಧ ಜನಸಾಮಾನ್ಯರು ಪ್ರತಿಭಟನೆ ನಡೆಸಬೇಕಾದ ದಯನೀಯ ಸ್ಥಿತಿ ಇದೆ. ಇದಕ್ಕಿಂತಲೂ ವಿಪರ್ಯಾಸದ ಸಂಗತಿಯೆಂದರೆ, ಕಾನೂನು ಮುರಿಯುತ್ತಿರುವವರ ವಿರುದ್ಧ ಯಾವ ಕ್ರಮವನ್ನೂ ಕೈಗೊಳ್ಳದಿರುವ ಸರ್ಕಾರ, ಬದಲಾಗಿ ಇದರ ವಿರುದ್ಧ ಪ್ರತಿಭಟಿಸಿದವರನ್ನೇ ಕಾನೂನು ಮುರಿದರೆಂದು ಆರೋಪಿಸಿ ಬಂಧಿಸುವ ಕಾರ್ಯಕ್ಕೆ ಮುಂದಾಗಿದೆ.