Tuesday, November 2, 2010

ಪ್ರಾದೇಶಿಕತೆಗೆ ಅಡ್ಡಿ ಪಡಿಸುತ್ತಿರುವ ರಾಷ್ಟ್ರೀಯ ಪಕ್ಷಗಳು

ರಾಷ್ಟ್ರೀಯ ಪಕ್ಷಗಳಾದ ಬಿ.ಜೆ.ಪಿ ಹಾಗು ಕಾಂಗ್ರೆಸ್ಸ್ ಹುಸಿ ರಾಷ್ಟ್ರೀಯತೆಯ ಕಲ್ಪನೆಯಲ್ಲಿ, ಪ್ರಾದೇಶಿಕತೆ ಹಾಗೂ ಪ್ರಾದೇಶಿಕ ಪಕ್ಷಗಳನ್ನು ನಾಶ ಮಾಡುವ ಕೆಲಸಕ್ಕೆ ಕೈ ಹಾಕಿವೆ. ಈ ರಾಜ್ಯದಿಂದ ಆಯ್ಕೆಯಾಗುವ ಜನಪ್ರತಿನಿಧಿಗಳು, ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಸಹ ಹೈಕಮಾಂಡಿನ ಮುಂದೆ ಕೈ ಒಡ್ಡುವ ಪರಿಸ್ಥಿತಿ ಬಂದೊದಗಿದೆ. ನಾಡಿನ ಹಾಗೂ ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ರೆಸಾರ್ಟ್ ರಾಜಕೀಯದಲ್ಲಿ ಮುಳುಗಿರುವ ಈ ರಾಷ್ಟ್ರೀಯ ಪಕ್ಷಗಳ ಜನಪ್ರತಿನಿಧಿಗಳಿಂದ ನಾಡಿನ ಅಭಿವೃದ್ಧಿ ನಿರೀಕ್ಷೆಮಾಡಲು ಸಾಧ್ಯವಿಲ್ಲ. ನಮ್ಮ ರಾಜ್ಯದ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷವೊಂದರ ಅಗತ್ಯತೆ ಇಂದು ಬಂದೊದಗಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ನಾಗರಬಾವಿ ಘಟಕ ಏರ್ಪಡಿಸಿದ್ದ "ಕನ್ನಡೋತ್ಸವ"ದಲ್ಲಿ ಮಾತನಾಡಿದ ಶ್ರೀ ಟಿ. ಎ. ನಾರಾಯಣಗೌಡರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು, ಇದರ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ.