Monday, December 13, 2010

ಭ್ರಷ್ಟಾಚಾರ ವಿರೋಧಿಸಿ ರಾಜ್ಯವ್ಯಾಪಿ ಪ್ರತಿಭಟನೆ

ನಮ್ಮ ರಾಜ್ಯ ಸರಕಾರದಲ್ಲಿ ನಡೆಯುತ್ತಿರುವ ಆಡಳಿತ ದುರುಪಯೋಗದಿಂದ ನಾಡಿನೆಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ರಾಜ್ಯದ ಜನತೆ ಇದರಿಂದಾಗಿ ಹಲವು ತೊಂದರೆಗಳಿಗೆ ಒಳಗಾಗಿದ್ದಾರೆ. ಭ್ರಷ್ಟಾಚಾರದ ವಿಷಯವಾಗಿ ಕರ್ನಾಟಕ ಇಂದು ಎಲ್ಲರ ಮುಂದೆ ತಲೆತಗ್ಗಿಸುವ ಸ್ಥಿತಿ ತಲುಪಿದೆ.

ರಾಜ್ಯ ಸರಕಾರಲ್ಲಿ ನಡೆಯುತ್ತಿರುವ ಈ ಆಡಳಿತ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧ ಡಿಸೆಂಬರ್ ೯ ರಂದು ನಾವು ನಾಡಿನ ಇತರ ಪ್ರಗತಿಪರ ಸಂಘಟನೆಗಳ ಜೊತೆಗೂಡಿ ರಾಜ್ಯವ್ಯಾಪಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಿದೆವು.