Saturday, January 22, 2011

ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಭರದ ಸಿದ್ಧತೆ

ಬೆಂಗಳೂರಿನಲ್ಲಿ ೭೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ೨೦೧೧ ರ ಫೆಬ್ರವರಿ ೪ ರಿಂದ ೬ ರ ವರೆಗೆ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು, ಮೆರವಣಿಗೆ ಸಮಿತಿಯ ಅಧ್ಯಕ್ಷತೆಯನ್ನು ನಮ್ಮ ವೇದಿಕೆಯ ಅಧ್ಯಕ್ಷರಾದ ಟಿ.ಎ. ನಾರಾಯಣಗೌಡರಿಗೆ ವಹಿಸಿದೆ. ಸಮ್ಮೇಳನದ ಮೊದಲನೇ ದಿನ ಮೆರೆವಣಿಗೆ ನಡೆಯಲಿದ್ದು, ಇದರಲ್ಲಿ ಲಕ್ಷಾಂತರ ಕನ್ನಡಿಗರು ಸೇರುವ ನಿರೀಕ್ಷೆಯಿದೆ. ಮೆರವಣಿಗೆಗೆ ಬೇಕಾದ ಎಲ್ಲಾ ತರಹದ ತಯಾರಿಗಳೂ ಭರದಿಂದ ಸಾಗುತ್ತಿದೆ. ಈ ವಿಷಯದ ಬಗ್ಗೆ ಪತ್ರಿಕಾ ವರದಿಯನ್ನು ನೋಡಿ-