Wednesday, September 14, 2011

ಕೇಂದ್ರ ಸರ್ಕಾರದ ಭಾಷಾನೀತಿ ಬದಲಾಗಬೇಕು ಎಂದು ಒತ್ತಾಯಿಸಿ ನಮ್ಮ ಪ್ರತಿಭಟನೆ

ಕೇಂದ್ರ ಸರ್ಕಾರದ ಭಾಷಾನೀತಿ ಬದಲಾಗಬೇಕು ಹಾಗೂ ಒಕ್ಕೂಟ ವ್ಯವಸ್ಥೆಯ ವಿರೋಧಿಯಾಗಿರುವ ಸೆಪ್ಟಂಬರ್ ೧೪ ರಂದು ನಡೆಸುವ "ಹಿಂದಿ ದಿವಸ"ದ ಆಚರಣೆಯನ್ನು ರದ್ದುಮಾಡಬೇಕು, ಹಾಗೂ ರಾಜ್ಯದಲ್ಲಿರುವ ಕೇಂದ್ರದ ವ್ಯಾಪ್ತಿಯ ಎಲ್ಲಾ ಇಲಾಖೆಗಳು, ಇನ್ನಿತರ ಸಂಸ್ಥೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಆಡಳಿತ ಭಾಷೆಯನ್ನಾಗಿ ಬಳಸಬೇಕೆಂದು ಕೇಂದ್ರವನ್ನು ಒತ್ತಾಯಿಸಿ ನಮ್ಮ ವೇದಿಕೆಯು ಇಂದು (ಸೆಪ್ಟಂಬರ್ 14) ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು.



ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ ನಂತರ ಕರ್ನಾಟಕದ ರಾಜ್ಯಪಾಲರಾದ ಶ್ರೀ ಹೆಚ್. ಆರ್. ಭಾರಧ್ವಾಜ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು.