Wednesday, December 14, 2011

ಮೆಟ್ರೋದಲ್ಲಿ ಕನ್ನಡಿಗರಿಗೆ ಆದ್ಯತೆ ಬಗ್ಗೆ ಕರವೇ ನಡೆಸಿದ ಹೋರಾಟಕ್ಕೆ ಬಿ.ಎಂ.ಆರ್.ಸಿ.ಎಲ್. ಪ್ರತಿಕ್ರಿಯೆ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ನೀಡಬೇಕು, ಎಲ್ಲಾ ಹಂತಗಳಲ್ಲಿಯೂ ಕನ್ನಡವನ್ನು ಬಳಸಬೇಕು ಮತ್ತು ಅನಗತ್ಯವಾದ ಹಿಂದಿ ಬಳಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿರುವ ಬಿ.ಎಂ.ಅರ್.ಸಿ.ಎಲ್ ಮುಖ್ಯ ಕಛೇರಿಯ ಮುಂದೆ ನಾವು ಡಿಸೆಂಬರ್ ೨, ೨೦೧೧ ರಂದು ಪ್ರತಿಭಟನೆ ನಡೆಸಿದ್ದೆವು. ಕನ್ನಡಿಗರ ಪರವಾಗಿ ನಾವು ಮಾಡಿದ್ದ ಈ ಹಕ್ಕೊತ್ತಾಯ ಪರಿಣಾಮ ಬೀರಿದ್ದು, ಪ್ರತಿಭಟನೆ ವೇಳೆ ನಾವು ಮನವಿಪತ್ರದಲ್ಲಿ ಪ್ರಸ್ತಾಪಿಸಿದ್ದ ಕೆಲವೊಂದು ವಿಷಯಗಳಿಗೆ ಬಿ.ಎಂ.ಆರ್.ಸಿ.ಎಲ್. ಕಂಪನಿ ಪ್ರತಿಕ್ರಿಯೆ ನೀಡಿದೆ.

ಬಿ.ಎಂ.ಆರ್.ಸಿ.ಎಲ್ ಕಂಪನಿಯ ಕಾರ್ಯದರ್ಶಿ ಮತ್ತು ಪ್ರಧಾನ ವ್ಯವಸ್ಥಾಪಕರು ಪ್ರತಿಕ್ರಿಯೆ ನೀಡಿ ಕಳಿಸಿರುವ ಪತ್ರದ ಪ್ರತಿಯನ್ನು ಕೆಳಗೆ ಲಗತ್ತಿಸಲಾಗಿದೆ: