Friday, November 30, 2012

೨೦೧೨ ರ ರಾಜ್ಯಮಟ್ಟದ ಗಡಿನಾಡ ಕನ್ನಡಿಗರ ಜಾಗೃತಿ ಸಮಾವೇಶ - ಪತ್ರಿಕಾವರದಿ

ಕನ್ನಡ ಚಳವಳಿಗೆ 50 ವರ್ಷ ತುಂಬಿದ ಸಂದರ್ಭದಲ್ಲಿ ೩೦-೧೧-೨೦೧೨ ರಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿಯಲ್ಲಿ ರಾಜ್ಯಮಟ್ಟದ "ಗಡಿನಾಡ ಕನ್ನಡಿಗರ ಜಾಗೃತಿ ಸಮಾವೇಶ" ನಡೆಸಿತು.

ಸಮಾವೇಶದಲ್ಲಿ ಬೃಹತ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಗೆ ನಾಗನೂರು ರುದ್ರಾಕ್ಷಿಮಠ ಸಿದ್ದರಾಮ ಸ್ವಾಮೀಜಿ ಹಾಗು ಕಾರಂಜಿ ಗುರುಸಿದ್ದ ಸ್ವಾಮಿಜಿ ಚಾಲನೆ ನೀಡಿದರು. ರಾಜ್ಯದ ನಾನ ಕಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ  ಆಗಮಿಸಿದ್ದ ವೇದಿಕೆ ಕಾರ್ಯಕರ್ತರು ಹಾಗು ಅಭಿಮಾನಿಗಳು ಈ ಮೆರವಣಿಗೆಯಲ್ಲಿ ಪಾಲ್ಗೊಂಡರು. ಅಶೋಕ ವೃತ್ತದಿಂದ ಆರಂಭವಾದ ಬೃಹತ್ ಮೆರವಣಿಗೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತ, ಜಿಲ್ಲಾಧಿಕಾರಿ ಕಚೇರಿ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮಾರ್ಗವಾಗಿ ಸಿಪಿಎಡ್ ಮೈದಾನ ತಲುಪಿತು.

ಸಂಜೆ ಜಾನಪದ ರಸ ಸಂಜೆ ಕಾರ್ಯಕ್ರಮಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಹಾಗು ಗೃಹ ಸಚಿವರಾದ ಆರ್. ಅಶೋಕ್ ಚಾಲನೆ ನೀಡಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಚಂಚಲಿ ಸಿದ್ದಸಂಸ್ಥಾನಮಠದ ಅಲ್ಲಮಪ್ರಭುಶ್ರೀ, ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯಶ್ರೀ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ರಾಘವೇಂದ್ರ ಜೋಶಿ, ರಾಮಚಂದ್ರ ಢವಳಿ, ಕಲ್ಲಪ್ಪಣ್ಣ ಸಂಗೊಳ್ಳಿ, ಸಾವಿತ್ರಿ ಅಪ್ಪುಗೋಳರನ್ನು ಸನ್ಮಾನಿಸಲಾಯಿತು.

ಇದರ ಪತ್ರಿಕಾವರದಿಗಳನ್ನು ಇಲ್ಲಿ ನೋಡಿ-

ಕನ್ನಡ ಪ್ರಭ ವರದಿ -