Wednesday, December 22, 2010

ರೈಲ್ವೆ ಹುದ್ದೆಗಳಿಗೆ ಕರ್ನಾಟಕದವರನ್ನೇ ನೇಮಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ

ರೈಲ್ವೆ ಇಲಾಖೆ ಈ ಬಾರಿ ವಿವಿಧ ಹುದ್ದೆಗಳಿಗೆ ಪರೀಕ್ಷೆ ನಡೆಸಲು ಮುಂದಾಗಿದ್ದು ಕಳೆದಬಾರಿ 4701 ಸ್ಥಾನಗಳಿಗೆ ಅರ್ಜಿ ಹಾಕಿದ್ದವರೂ ಮತ್ತೊಮ್ಮೆ ಅರ್ಜಿ ಹಾಕಬಹುದು ಎನ್ನುವ ಮೂಲಕ ಹೊರರಾಜ್ಯದವರನ್ನು ಮತ್ತೊಮ್ಮೆ ಕರ್ನಾಟಕದ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವ ಹುನ್ನಾರ ನಡೆಸಿದೆ. ಈ ಹಿಂದೆಯೂ ರೈಲ್ವೆ ಇಲಾಖೆಯು 2007 ರಲ್ಲಿ ಡಿ ಗ್ರೂಪ ಹುದ್ದೆಗಳಿಗೆ ಬಿಹಾರಿಗಳನ್ನು ತುಂಬಲು ಮುಂದಾಗಿತ್ತು. ಆಗ ಅದನ್ನು ಪ್ರತಿಭಟಿಸಿ ಹೋರಾಟ ನಡೆಸಿದ್ದೆವು ಮತ್ತು ಕಳೆದ ೩ ವರ್ಷಗಳಿಂದ ಸತತವಾಗಿ ಈ ಬಗ್ಗೆ ಹೋರಾಟ ನಡೆಸುತ್ತಾ ಬಂದಿದ್ದೇವೆ.

ಇದೇ ಸಂಬಂಧವಾಗಿ ಈ ಬಾರಿ ನಡೆಸುವ ಪರೀಕ್ಷೆಗಳಿಗೆ ಕರ್ನಾಟಕದವರನ್ನೇ ನೇಮಕ ಮಾಡಿಕೊಳ್ಳಬೇಕು ಮತ್ತು ಹೊರ ರಾಜ್ಯದವರಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ನೆನ್ನೆ ಮತ್ತೊಮ್ಮೆ ಬೆಂಗಳೂರಿನ ನೈರುತ್ಯ ರೈಲ್ವೆ ಕಚೇರಿ ಮುಂಭಾಗ ಹೋರಾಟ ನಡೆಸಿದೆವು.

ಅದೇ ಸಂದರ್ಭದಲ್ಲಿ ಕಳೆದ ವರ್ಷವೇ ಮಮತಾ ಬ್ಯಾನರ್ಜಿಯವರ ನೇತೃತ್ವದಲ್ಲಿ ರೈಲ್ವೆ ಇಲಾಖೆಯು ತೀರ್ಮಾನಿಸಿದಂತೆ ಇಲಾಖೆ ನಡೆಸುವ ಪರೀಕ್ಷೆಯನ್ನು ಕನ್ನಡಿಗರು ಕನ್ನಡದಲ್ಲೇ ಬರೆಯುವ ಅವಕಾಶ ಮತ್ತು ಇಡೀ ದೇಶದಲ್ಲಿ ಒಂದೇ ಸಮಯದಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆಯನ್ನು ಮುಂಬರುವ ಪರೀಕ್ಷೆಯಿಂದಲೇ ಜಾರಿಗೆ ತರಬೇಕೆಂದು ಒತ್ತಾಯಿಸಿದೆವು. ಹೋರಾಟದ ಪತ್ರಿಕಾ ವರದಿಗಳನ್ನು ಕೆಳಗೆ ಲಗತ್ತಿಸಿದೆ.