Showing posts with label ಆಡಳಿತ ಸುಧಾರಣೆ / Administrative Reforms. Show all posts
Showing posts with label ಆಡಳಿತ ಸುಧಾರಣೆ / Administrative Reforms. Show all posts

Thursday, June 28, 2012

ಲೋಕಾಯುಕ್ತರನ್ನು ಶೀಘ್ರವೇ ನೇಮಕ ಮಾಡಬೇಕೆಂದು ಒತ್ತಾಯಿಸಿ ಕ.ರ.ವೇ. ಇಂದ ಪ್ರತಿಭಟನೆ

ಕರ್ನಾಟಕ ರಾಜ್ಯಕ್ಕೆ ನೂತನ ಲೋಕಾಯುಕ್ತರನ್ನು ಶೀಘ್ರವೇ ನೇಮಕ ಮಾಡಬೇಕೆಂದು ಒತ್ತಾಯಿಸಿ ನಮ್ಮ ವೇದಿಕೆಯ ವತಿಯಿಂದ ೨೯-೦೬-೨೦೧೨ ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಯಿತು.

ಇದರ ವರದಿಯನ್ನು ಇಲ್ಲಿ ನೋಡಿ -
 

ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ನೂತನ ಮುಖ್ಯಸ್ಥರನ್ನು ಕೂಡಲೇ ನೇಮಿಸಿ - ಕ.ರ.ವೇ. ಇಂದ ರಾಜ್ಯವ್ಯಾಪಿ ಪ್ರತಿಭಟನೆ ಮತ್ತು ಮುಖ್ಯಮಂತಿಗಳಿಗೆ ಸಲ್ಲಿಸಿದ ಮನವಿ ಪತ್ರ

ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ನೂತನ ಮುಖ್ಯಸ್ಥರನ್ನು ಕೂಡಲೇ ನೇಮಕ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಮ್ಮ ವೇದಿಕೆಯು ಇಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಸಲ್ಲಿಸಿದ ಮನವಿ ಪತ್ರ.







Monday, September 5, 2011

ಕಳಂಕಿತರ ಸೆರೆಯಾಗಲಿ

ಲೋಕಾಯುಕ್ತ ವರದಿಯ ಕುರಿತು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಬೇಕೆಂದು ನಮ್ಮ ರಾಜ್ಯಾಧ್ಯಕ್ಷರು ಒತ್ತಾಯಿಸಿದ್ದಾರೆ

Wednesday, August 17, 2011

ಅಣ್ಣ ಹಜಾರೆಯವರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ


ಭ್ರಷ್ಟಾಚಾರದ ವಿರುದ್ದ ಹೋರಾಟ ನಡೆಸುತ್ತಿರುವ ಅಣ್ಣ ಹಜಾರೆಯವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ 16 ಆಗಸ್ಟ್ 2011 ರಂದು ಪ್ರತಿಭಟನೆ ನಡೆಸಲಾಯಿತು.


Thursday, July 28, 2011

ಗಣಿ ಹಗರಣದಲ್ಲಿ ಸಿಲುಕಿರೊ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ

ಲೋಕಾಯುಕ್ತರಾದ ಸಂತೋಷ್ ಹೆಗಡೆಯವರು ಸಲ್ಲಿಸಿರುವ ಅಕ್ರಮ ಗಣಿಗಾರಿಕೆ ಕುರಿತ ವರದಿಯಲ್ಲಿ ಮುಖ್ಯಮಂತ್ರಿಗಳ ಹೆಸರು ಪ್ರಸ್ತಾಪವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ ಮುಂದಿನ ತನಿಖೆಗೆ ಸಹಕರಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆವು.

Friday, July 22, 2011

ಸಂತೋಷ್ ಹೆಗಡೆ ರವರ ದೂರವಾಣಿ ಕದ್ದಾಲಿಕೆಯ ಬಗ್ಗೆ ತನಿಖೆ ನಡೆಯಲಿ

ಗಣಿ ಹಗರಣದ ಲೋಕಾಯುಕ್ತ ತನಿಖೆಯ ವರದಿಯು ಸರಕಾರಕ್ಕೆ ಸಲ್ಲಿಸುವ ಮೊದಲೇ ಬಿಡುಗಡೆಗೊಂಡಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಮಾನ್ಯ ಲೋಕಾಯುಕ್ತರಾದ ಸಂತೋಷ್ ಹೆಗಡೆಯವರು ತಮ್ಮ ದೂರವಾಣಿ ಕದ್ದಾಲಿಕೆ ನಡೆದಿರಬಹುದೆಂಬ ಸಂಶಯ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ 22 ಜುಲೈ ೨೦೧೧ ರಂದು ಪ್ರತಿಭಟನೆ ನಡೆಸಿದೆವು.



Monday, December 13, 2010

ಭ್ರಷ್ಟಾಚಾರ ವಿರೋಧಿಸಿ ರಾಜ್ಯವ್ಯಾಪಿ ಪ್ರತಿಭಟನೆ

ನಮ್ಮ ರಾಜ್ಯ ಸರಕಾರದಲ್ಲಿ ನಡೆಯುತ್ತಿರುವ ಆಡಳಿತ ದುರುಪಯೋಗದಿಂದ ನಾಡಿನೆಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ರಾಜ್ಯದ ಜನತೆ ಇದರಿಂದಾಗಿ ಹಲವು ತೊಂದರೆಗಳಿಗೆ ಒಳಗಾಗಿದ್ದಾರೆ. ಭ್ರಷ್ಟಾಚಾರದ ವಿಷಯವಾಗಿ ಕರ್ನಾಟಕ ಇಂದು ಎಲ್ಲರ ಮುಂದೆ ತಲೆತಗ್ಗಿಸುವ ಸ್ಥಿತಿ ತಲುಪಿದೆ.

ರಾಜ್ಯ ಸರಕಾರಲ್ಲಿ ನಡೆಯುತ್ತಿರುವ ಈ ಆಡಳಿತ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧ ಡಿಸೆಂಬರ್ ೯ ರಂದು ನಾವು ನಾಡಿನ ಇತರ ಪ್ರಗತಿಪರ ಸಂಘಟನೆಗಳ ಜೊತೆಗೂಡಿ ರಾಜ್ಯವ್ಯಾಪಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಿದೆವು.

Tuesday, July 27, 2010

ಪ್ರತಿಭಟನೆ ನಡೆಸಿದ ಹೋರಾಟಗಾರರಿಗೆ ಕೈ ಕೋಳ

ಕೊಪ್ಪಳ ನಗರದ ಮಧ್ಯ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಿರಿದಾಗಿದ್ದು ವಾಹನ ದಟ್ಟಣೆ ಹಾಗೂ ಅಪಘಾತಗಳಿಗೆ ಕಾರಣವಾಗಿದೆ. ಇದರಿಂದ ನಮ್ಮ ಕಾರ್ಯಕರ್ತರು ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಜುಲೈ ೨೫ ರಂದು ಪ್ರತಿಭಟನೆ ನಡೆಸಿದ್ದರು. ಪೋಲೀಸರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಮ್ಮ ಕಾರ್ಯಕರ್ತರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಕೈ ಕೋಳವನ್ನು ತೊಡೆಸಿದ್ದರು. ಪ್ರತಿಭಟನೆ ನಡೆಸಿದ ಕಾರ್ಯಕರ್ತರಿಗೆ ಕೈ ಕೋಳವನ್ನು ತೊಡೆಸಿ, ಹೋರಾಟಗಾರರನ್ನು ಅಪರಾಧಿಗಳಂತೆ ಬಿಂಬಿಸಿ ನಮ್ಮ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದರ ವಿರುದ್ಧ ಜೂನ್ ೨೭ ರಂದು ನಮ್ಮ ಕಾರ್ಯಕರ್ತರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಿದರು.




Tuesday, June 29, 2010

ಭ್ರಷ್ಟಾಚಾರ ತಡೆಗಟ್ಟಲು ರಾಜ್ಯ ಸರಕಾರ ವಿಫಲ - ಕರವೇ ಪ್ರತಿಭಟನೆ

ಕರ್ನಾಟಕದ ಆಡಳಿತದಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟಲು ಇರುವ ಲೋಕಾಯುಕ್ತ ಸಂಸ್ಥೆಗೆ ಸರಿಯಾದ ಅಧಿಕಾರವನ್ನು ನೀಡದೇ, ಭ್ರಷ್ಟಾಚಾರವನ್ನು ತಡೆಗಟ್ಟಲು ವಿಫಲವಾಗಿರುವ ರಾಜ್ಯ ಸರಕಾರದ ನಡೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು 24/6/2010 ರಂದು ಪ್ರತಿಭಟನೆ ನಡೆಸಿದರು. ಇದರ ಪತ್ರಿಕಾ ವರದಿಯನ್ನು ನೋಡಿ-





Sunday, March 15, 2009

ರಾಜ್ಯದ ಪರ ದನಿಯೆತ್ತುವವರಿಗೆ ಮಾತ್ರ ನಮ್ಮ ಬೆಂಬಲ

೨೦೦೯ ರ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವನ್ನು ಬೆಂಬಲಿಸದೇ, ರಾಜ್ಯದ ಹಿತವನ್ನು ಕಾಯುವ ಜನರನ್ನು ಮಾತ್ರ ಬೆಂಬಲಿಸುವ ನಿರ್ಧಾರವನ್ನು ಮಾಡಲಾಗಿದೆ. ಇದರ ಬಗೆಗಿನ ಪತ್ರಿಕಾ ಹೇಳಿಕೆಯನ್ನು ನೋಡಿ-





Thursday, December 4, 2008

ಬೆಂಗಳೂರು ಹಬ್ಬಕ್ಕೆ ಅನುದಾನ ನಿಲ್ಲಿಸಿ






Monday, September 22, 2008

ಪೊಲೀಸರ ಮೇಲೆ ಹಲ್ಲೆ ನಡೆಸಿದ ಬಿಹಾರಿಗಳು ಮತ್ತು ಪ.ಬಂಗಾಳದವರ ವಿರುದ್ಧ ಪ್ರತಿಭಟನೆ..

ಕಳೆದ ವಾರ ಬೆಂಗಳೂರಿನಲ್ಲಿ ಪುಂಡಾಟಿಕೆ ಮಾಡುತ್ತಿದ್ದ ಬಿಹಾರಿ ಮತ್ತು ಪಶ್ಚಿಮ ಬಂಗಾಳದವರನ್ನು ಪೋಲೀಸರು ಪ್ರಶ್ನಿಸಿದಾಗ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದರು. ಇದರ ವಿರುದ್ಧ ಕರವೇ ಪ್ರತಿಭಟನೆ ನಡೆಸಿತು.