ಕ.ರ.ವೇ. ಇಂದ ಕವನ ಸಂಕಲನಗಳ ಬಿಡುಗಡೆ
ಇದರ ಮೊದಲ ಹೆಜ್ಜೆಯಾಗಿ ನಿವೃತ್ತ ಸರಕಾರಿ ಅಧಿಕಾರಿ ಮಲ್ಲಿಕಾರ್ಜುನಪ್ಪ ನವರು ಬರೆದಿರುವ 'ಚಿತ್ತ ಎತ್ತ' ಮತ್ತು 'ಭಾವಯಾನ' ಎಂಬ ಕವನ ಸಂಕಲನಗಳನ್ನು ರಾಜ್ಯಾಧ್ಯಕ್ಷರಾದ ಟಿ.ಏ ನಾರಾಯಣಗೌಡರು ಬಿಡುಗಡೆಗೊಳಿಸಿದರು. ಈ ಸಮಯದಲ್ಲಿ ಭಾಗವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಲ್ಲೂರು ಪ್ರಸಾದ್ ಕರವೇಯ 'ಗಂಗಾ' ಪ್ರಕಾಶನಕ್ಕೆ ಎಲ್ಲಾ ರೀತಿಯ ಬೆಂಬಲ ನೀಡಲಾಗುವುದೆಂದು ತಿಳಿಸಿದರು.






